ಎತ್ತಿನಹೊಳೆ ಮತ್ತು ಕೆಸಿ ಕಣಿವೆ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಗೆತ್ತಿಕೊಂಡಿದ್ದು, ಇದರಿಂದ ಕೋಲಾರ, ಚಿಕ್ಕಬಳ್ಳಾಪುರ ಜನತೆಯ ನೀರಿನ ಬವಣೆಯನ್ನು ತಪ್ಪಿಸಬಹುದು. ಆದರೆ ವಿರೋಧ ಪಕ್ಷಗಳು ಈ ವಿಷಯವನ್ನು ಬೇರೆಡೆಗೆ ಬದಲಾಯಿಸಲು ಯತ್ನಿಸುತ್ತಿವೆ. ಜನರಿಗೆ ಇದರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಕೋಲಾರ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.