ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಡಿ.31 ರಂದು ಬಿಜೆಪಿ ನಾಯಕರ ಸಭೆ ನಡೆದಿದ್ದು ಚುನಾವಣೆಗೆ ರಣತಂತ್ರ ಹೆಣೆಯುವುದರ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ. ಚುನಾವಣೆ ತಯಾರಿ ಬಗ್ಗೆ ರಾಜ್ಯ ನಾಯಕರಿಗೆ ಪಾಠ ಮಾಡಿರುವ ಅಮಿತ್ ಶಾ, ಟಿಕೆಟ್ ಬಗ್ಗೆ ರಾಜ್ಯದ ಯಾವುದೇ ನಾಯಕರು ಬಹಿರಂಗ ಘೋಷಣೆ ಮಾಡುವಂತಿಲ್ಲ, ರ್ಯಾಲಿಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುವಂತಿಲ್ಲ, ಟಿಕೆಟ್ ನೀಡುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹೈಕಮಾಂಡ್ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.