ಕುಮಾರಸ್ವಾಮಿಯಂತಹ 'ಗೂಳಿ'ಯನ್ನು ಪಳಗಿಸುವುದು ಹೇಗೆಂದು ಕಾಂಗ್ರೆಸ್ ಗೆ ಗೊತ್ತು!

ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಇನ್ನು ಏಳೆಂಟು ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು...
ಸಿಎಂ ಧನಂಜಯ, ಹೆಚ್ ಡಿ ಕುಮಾರಸ್ವಾಮಿ
ಸಿಎಂ ಧನಂಜಯ, ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಇನ್ನು ಏಳೆಂಟು ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿಎಂ ಧನಂಜಯ, ಕುಮಾರಸ್ವಾಮಿಯವರನ್ನು 'ಹುಚ್ಚುಚ್ಚಾಗಿ ಎಗರಾಡುವ ಗೂಳಿ'ಗೆ ಹೋಲಿಸಿದ್ದಾರೆ.

ಹುಚ್ಚುಚ್ಚಾಗಿ ಎಗರಾಡುತ್ತಿರುವ ಗೂಳಿಯನ್ನು ಪಳಗಿಸುವುದು ಹೇಗೆಂದು ಕಾಂಗ್ರೆಸ್ ಗೆ ಗೊತ್ತಿದೆ. ಅವರ ಹೇಳಿಕೆಗಳು ಆಧಾರರಹಿತ ಎಂದು ಧನಂಜಯ ಪ್ರತಿಕ್ರಯಿಸಿದ್ದಾರೆ.

ಸ್ವತಃ ಜೆಡಿಎಸ್ ಪಕ್ಷವೇ ಇಬ್ಭಾಗವಾಗುವ ಅಪಾಯ ಸ್ಥಿತಿಯಲ್ಲಿದೆ. ಅವರದೇ ಪಕ್ಷದ ವಿಧಾನ ಪರಿಷತ್ ಸದಸ್ಯರೊಬ್ಬರು ಮಾಜಿ ಉಪ ಮುಖ್ಯಮಂತ್ರಿಯಿಂದ ಹಣವನ್ನು ಪಡೆದು ಈಗ ಬಿಜೆಪಿಗೆ ಪ್ರಚಾರ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ತಮ್ಮ ಪಕ್ಷವನ್ನು ಮೊದಲು ನೋಡಿಕೊಳ್ಳಲಿ ಎಂದು ಧನಂಜಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com