ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಅರಮನೆ ಮೈದಾನದಲ್ಲಿ ಮಾರ್ಚ್ 15ರಂದು ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಜೆಪಿ ಕಾಲದ ಎಲ್ಲರಿಗೂ ಆಹ್ವಾನವಿದೆ ಎಂದು ತಿಳಿಸಿದರು. ಅಲ್ಲದೆ ಜನತಾ ಪರಿವಾರ ಒಟ್ಟುಗೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಮಾಡುತ್ತಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.