ಬೆಂಗಳೂರು: ಡೈರಿ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಅವರು ಬುಧವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.
ದಿನೇಶ್ ಗುಂಡೂರಾವ್ ಅವರು ನನ್ನ ವಿರುದ್ಧ ನಕಲಿ ಡೈರಿ ಬಿಡುಗಡೆ ಮಾಡಿದ್ದು, ಅದು ನನ್ನ ಡೈರಿಯಲ್ಲ ಮತ್ತು ನನ್ನ ಸಹಿಯನ್ನು ನಕಲು ಮಾಡಲಾಗಿದೆ ಎಂದು ಆರೋಪಿಸಿ ಇಂದು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ ನಕಲಿ ಡೈರಿ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು ಅವರ ಮನೆಯಲ್ಲಿ ಪತ್ತೆಯಾಗಿರುವುದು ನಿಜವಾದ ಡೈರಿ, ಆದರೆ ನನ್ನ ವಿರುದ್ಧ ನಕಲಿ ಡೈರಿ ಸೃಷ್ಟಿ ಮಾಡಿ ಬಿಡುಗಡೆ ಮಾಡಿದ್ದಾರೆ. ಯಾರೂ ಕೂಡಾ ಡೈರಿಯಲ್ಲಿ ಸಹಿ ಮಾಡಲ್ಲ ಎಂದು ಲೆಹರ್ ಸಿಂಗ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.