ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಸಮ್ಮುಖದಲ್ಲಿ ಶ್ರೀನಿವಾಸ್ ಪ್ರದಾಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಗೆ ಶ್ರೀನಿವಾಸ ಪ್ರಸಾದ್ ಅವರು ಸೇರ್ಪಡೆಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಸಮರ್ಥ ದಲಿತ ನಾಯಕರ ಕೊರತೆ ನೀಗಿದೆ. ಇನ್ನು ಮುಂಬರುವ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಲಿದೆ.