ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಅಲ್ಪಸಂಖ್ಯಾಂತರ ಘಟಕದ ಪದಾಧಿಕಾರಿಗಳ ನೇಮಕ ಮತ್ತು ಕಾಂಗ್ರೆಸ್ ಮುಖಂಡರು, ಯುವಕರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಇಲ್ಲಿನ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರ ಆಶಯದಂತೆ ಇಲ್ಲಿ ಸ್ಪರ್ಧಿಸಿ ಅಭಿವೃದ್ಧಿಗೆ ಶ್ರಮಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.