ಚಿಕ್ಕಬಾಣಾವರ, ನಾಗಸಂದ್ರ, ರಾಜಾ ಕೆನಾಲ್ನಲ್ಲಿ 65 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಮಾತು ಎತ್ತಿದ್ರೆ ದಲಿತರ ಮನಗೆ ಹೋಗಿ ಊಟ ಮಾಡ್ತೀನಿ ಅಂತಾರೆ, ಇಷ್ಟು ದಿನ ದಲಿತರ ಮನೆಯಲ್ಲಿ ಊಟ ಮಾಡಿದ್ದು ಸಾಕು, ದಲಿತರ ಮೇಲೆ ಪ್ರೀತಿ ಇದ್ದರೆ ಅವರ ಹೆಣ್ಣು ಮಕ್ಕಳನ್ನು ಇವರ ಮನೆಗೆ, ಇವರ ಹೆಣ್ಣು ಮಕ್ಕಳನ್ನು ದಲಿತರ ಮನೆಗೆ ಕೊಟ್ಟು ಮದುವೆ ಮಾಡಲಿ. ಕೇವಲ ದಲಿತರ ಬಗ್ಗೆ ಅವ್ರು ನಾಟಕ ಮಾಡ್ತಿದ್ದಾರೆ ಅಂತ ಬಿಎಸ್ವೈ ವಿರುದ್ಧ ಕಿಡಿಕಾರಿದರು.