ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಪ ಸಂಘಟನೆಗಳು, ಎಸ್ ಡಿಪಿಐ, ಪಿಎಫ್ಐ ಸೇರಿದಂತೆ ವಿವಿಧ ಸಂಘಟನೆಗಳು ಶಾಂತಿ ಕಾಪಾಡಲು ಮುಂದಾಗಬೇಕು. ಅದನ್ನು ಬಿಟ್ಟು ಕೋಮು ಗಲಭೆ ಸೃಷ್ಟಿಸಲು ಮುಂದಾಗುವ ಯಾವುದೇ ಸಂಘಟನೆ ಇರಲಿ, ಅವುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮತೀಯವಾದ ಪೋಷಿಸುವ ಸಂಘಠೆಗಳನ್ನು ಮಟ್ಟಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.