ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಂತಿ ಪುನರ್ ಸ್ಥಾಪಿಸಲು ದೇವೇಗೌಡರ ನೇತೃತ್ವದಲ್ಲಿ ಶೀಘ್ರವೇ ಶಾಂತಿ ಸಭೆ ನಡೆಸಲಾಗುವುದು ಎಂದು ಅವರು ಹೇಳಿದರು. ಈ ಸಭೆಗೆ ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ಬರು ನಾಯಕರನ್ನು ಆಹ್ವಾನಿಸಿದ್ದೇನೆ, ಜೊತೆಗೆ ಅವರ ಧಾರ್ಮಿಕ ಮುಖಂಡರನ್ನು ಕರೆದು ತರಲು ಹೇಳಿರುವುದಾಗಿ ತಿಳಿಸಿದ್ದಾರೆ. ಇನ್ನು ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಪಡಿಸುವುದಾಗಿ ಹೇಳಿದ್ದಾರೆ.