ಕೆಪಿಸಿಸಿಗೆ 171 ಪದಾಧಿಕಾರಿಗಳ ನೇಮಕ ಮಾಡಿದ ಮೇಲೆ ಇದೇ ಮೊದಲ ಬಾರಿಗೆ ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ನೇತೃತ್ವ ದಲ್ಲಿ ಸಭೆ ನಡೆದಿದ್ದು, ಹೊಸದಾಗಿ ನೇಮಕವಾಗಿರುವ 17 ಉಪಾಧ್ಯಕ್ಷರುಗಳಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಮೊದಲು ಜವಾಬ್ದಾರಿ ಇಲ್ಲ, ಹುದ್ದೆ ಇಲ್ಲ ಎಂದು ಹೇಳುತ್ತಿದ್ದಿರಿ. ಈಗ ಜವಾಬ್ದಾರಿ ಕೊಡಲಾಗಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡುವತ್ತ ಗಮನಹರಿಸಿ’ ಎಂದು ಅವರು ಶುಕ್ರವಾರ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.