ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರಿನ ಬಿಡದಿ ಬಳಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ನ 42 ಕಾಂಗ್ರೆಸ್ ಶಾಸಕರನ್ನು ಮಾಧ್ಯಮಗಳ ಮುಂದೆ ಹಾಜರುಪಡಿಸಿ ಮಾತನಾಡಿದ ಗೋಹಿಲ್ ಅವರು, ಕೆಲವೇ ಕೆಲವು ಮತಕ್ಕಾಗಿ ತಮ್ಮನ್ನು ಅಪಹರಿಸುವ ಅಥವಾ ಹತ್ಯೆ ಮಾಡುವ ಭಯದಿಂದ ಶಾಸಕರು ಇಲ್ಲಿಗೆ ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.