ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರುವುದನ್ನು ನಿರಾಕರಿಸಿರುವ ಸಿದ್ದರಾಮಯ್ಯ, ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ. ಇದೇ ವೇಳೆ ಎಐಸಿಸಿ ಮಾಧ್ಯಮ ವಿಭಾಗದ ಜವಾಬ್ದಾರಿಯನ್ನು ಹೊತ್ತಿರುವ ಮಾಜಿ ಸಂಸದೆ ರಮ್ಯಾ ಅವರ ಸೇವೆಯನ್ನೂ ಸಮರ್ಥವಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಳೆ, ಬರಗಾಲದ ಬಗ್ಗೆಯೂ ಸಿಎಂ ಮಾತನಾಡಿದ್ದು, ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿಲ್ಲ, ಮಳೆಗಾಗಿ ಪೂಜೆ ಮಾಡಿಸುವುದರಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.