ಶಂಕರಮೂರ್ತಿ ಭವಿಷ್ಯ ಇಂದು ನಿರ್ಧಾರ: ಬಿಜೆಪಿಗೆ ಜೆಡಿಎಸ್ ಬೆಂಬಲ ಸಾಧ್ಯತೆ

ವಿಧಾನಪರಿಷತ್ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ವಿರುದ್ಧ ಕಾಂಗ್ರೆಸ್‌ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಭವಿಷ್ಯ ..
ಡಿ.ಎಚ್ ಶಂಕರಮೂರ್ತಿ
ಡಿ.ಎಚ್ ಶಂಕರಮೂರ್ತಿ
Updated on
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ವಿರುದ್ಧ  ಕಾಂಗ್ರೆಸ್‌ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಭವಿಷ್ಯ  ಇಂದು ನಿರ್ಧಾರವಾಗಲಿದೆ.
ಶಂಕರಮೂರ್ತಿ ಬೆಂಬಲಿಸುವ ಸಂಬಂಧ ಮಂಗಳವಾರ ಜೆಡಿಎಸ್‌ ಗೊಂದಲದಲ್ಲಿತ್ತು. ಆದರೆ ಜೆಡಿಎಸ್‌ ರಾಜ್ಯ ಅಧ್ಯಕ್ಷ  ಎಚ್‌.ಡಿ.ಕುಮಾರಸ್ವಾಮಿ, ಶಂಕರಮೂರ್ತಿ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಸಭಾಪತಿ ಪದಚ್ಯುತಿಗೊಳಿಸುವ ಕಾಂಗ್ರೆಸ್ ಪ್ರಯತ್ನ ಕುತೂಹಲದ ಹಂತ ತಲುಪಿದ್ದು, ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. 
ವಿಧಾನಪರಿಷತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರ ಒಟ್ಟು ಸಂಖ್ಯೆ 36 ಆಗಲಿದೆ. ಕಾಂಗ್ರೆಸ್‌ 33 ಸ್ಥಾನಗಳನ್ನು ಹೊಂದಿದೆ. ಪಕ್ಷೇತರರ ಸಂಖ್ಯೆ 5. ವಿಮಲಾಗೌಡ ನಿಧನದಿಂದ ಒಂದು ಸ್ಥಾನ ಖಾಲಿ ಇದೆ. ಪಕ್ಷೇತರರ ಬೆಂಬಲ ಪಡೆಯುವ ಕಸರತ್ತು  ನಡೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com