ರೈತರ ಸಾಲ ಮನ್ನಾ ಮಾಡಿ ಇಲ್ಲವೆ ರಾಜಿನಾಮೆ ನೀಡಿ: ಸಿಎಂಗೆ ಎಚ್ ಡಿಕೆ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ....
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು, ತಾಕತ್ತಿದ್ರೆ ರೈತರ ಸಾಲ ಮನ್ನಾ ಮಾಡಿ. ಇಲ್ಲವೆ ರಾಜಿನಾಮೆ ನೀಡಿ ಮನಗೆ ಹೋಗಿ ಎಂದು ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಒಂದು ಕಡೆ ಬರಗಾಲ ಮತ್ತೊಂದೆಡೆ ಸಾಲದ ಬಾಧೆಯಿಂದಾಗಿ ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ರೈತರ ಸಮಸ್ಯೆಗಳು ಪರಿಹಾರವಾಗುವುದು ಯಾವಾಗ ಎಂದು ಪ್ರಶ್ನಿಸಿದರು. 
ರಾಜ್ಯದಲ್ಲಿ ಸುಮಾರು 3000 ರೈತರು ಸಾವನ್ನಪ್ಪಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಬಗ್ಗೆ ಗಮನ ಹರಿಸುತ್ತಿಲ್ಲ. ರಾಜ್ಯ ಸರ್ಕಾರವಾದರೂ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಕೇವಲ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮಾಡುವುದಾಗಿ ಮಾಜಿ ಸಿಎಂ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com