ರಾಷ್ಟ್ರಪತಿ ಜೊತೆ ಉಡುಪಿಗೆ ತೆರಳದ ಸಿಎಂ ರಹಸ್ಯ ಸ್ಥಳಕ್ಕೆ ಪ್ರಯಾಣ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಗದಿಯಂತೆ ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ..
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಗದಿಯಂತೆ ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕೃಷ್ಣಮಠ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜೊತೆಗೆ ಆಱೋಗ್ಯ ಸಚಿವ ರಮೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಗೆ ಕಳುಹಿಸಿದ್ದಾರೆ.
ಕೃಷ್ಣ ಮಠದ ವಿವಾದದ ಹಿನ್ನೆಲೆಯಲ್ಲಿ ಸಿಎಂ ಉಡುಪಿಗೆ ತೆರಳಲಿಲ್ಲ ಎಂದು ಮೂಲಗಳು ತಿಳಿಸಿವೆ. ಸಿಎ ಸಿದ್ದರಾಮಯ್ಯ ಉಡುಪಿ ಶ್ರೀಕೃಷ್ಣ ಮಠದ ಭಕ್ತರಲ್ಲ, ಆದರೂ ದೇವಾಲಯಗಳಿಗೆ ತೆರಳುತ್ತಾರೆ. ಸಿಎಂ ಉಡುಪಿಗೆ ಭೇಟಿ ನೀಡದ್ದಕ್ಕೆ ಇದು ಕಾರಣವಲ್ಲ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಕನಕ ಗೋಪುರ ಸಂಬಂಧ 2004 ರಲ್ಲಿ ಉಂಟಾದ ವಿವಾದದಿಂದಾಗಿ ಉಡುಪಿಗೆ ಸಿಎಂ ತೆರಳಲಿಲ್ಲ ಎಂದು ಹೇಳಲಾಗಿದೆ. 
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು  ಬೀಳ್ಕೊಟ್ಟ ಸಿಎಂ ಮತ್ತು ಪರಮೇಶ್ವರ್ ರಹಸ್ಯ ಸ್ಥಳಕ್ಕೆ ತೆರಳಿ ವಿಧಾನಮಂಡಲದ ಕಲಾಪದಲ್ಲಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗಾದ ಸೋಲು ಹಾಗೂ ಅಧಿವೇಶನದ ನಂತರ ಗೃಹ ಖಾತೆಯನ್ನು ಯಾರಿಗೆ ವಹಿಸಬೇಕೆಂಬ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com