ಉದ್ಯಮಿ, ಕಾಂಗ್ರೆಸ್ ನಾಯಕ ಕೆ.ಪಿ. ನಂಜುಂಡಿ ಬಿಜೆಪಿಗೆ ಸೇರ್ಪಡೆ

ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡು ಕಾಂಗ್ರೆಸ್‌ ಪಕ್ಷ ತೊರೆದಿದ್ದ ಉದ್ಯಮಿ ಹಾಗೂ ವಿಶ್ವಕರ್ಮ...
ಕೆ ಪಿ ನಂಜುಂಡಿ
ಕೆ ಪಿ ನಂಜುಂಡಿ
ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮeಧಾನಗೊಂಡು ಕಾಂಗ್ರೆಸ್‌ ಪಕ್ಷ ತೊರೆದಿದ್ದ ಉದ್ಯಮಿ ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ. ನಂಜುಂಡಿ ಅವರು ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ವಿಶ್ವಕರ್ಮ ಸಮಾಜದ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿತ ಬಳಿಕ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 
ಬಿಜೆಪಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಂಜುಂಡಿ, ನಾನು ಈಗಿಂದಲೇ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಯಾವ ಕೆಲಸ ಕೊಟ್ಟರೂ ಮಾಡುತ್ತೇನೆ. ಯಡಿಯೂರಪ್ಪ ಸತ್ಯ ಹರಿಶ್ಚಂದ್ರ ಇದ್ದಹಾಗೆ. ಕೊಟ್ಟ ಮಾತನ್ನು ಈಡೇರಿಸದೇ ಉಳಿಯುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com