ಜಂತಕಲ್ ಮೈನಿಂಗ್ ಪ್ರಕರಣ: ಆರೋಪ ಸಾಬೀತಾದ್ರೆ ನೇಣು ಹಾಕಿಕೊಳ್ತೇನೆ- ಎಚ್ ಡಿಕೆ

ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ತಪ್ಪಿತಸ್ಥ ಎಂದು ಸಾಬೀತಾದ್ರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುವುದಾಗಿ ಮಾಜಿ ಸಿಎಂ...
ಎಚ್. ಡಿ ಕುಮಾರಸ್ವಾಮಿ
ಎಚ್. ಡಿ ಕುಮಾರಸ್ವಾಮಿ
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ತಪ್ಪಿತಸ್ಥ ಎಂದು ಸಾಬೀತಾದ್ರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುವುದಾಗಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ತನಿಖೆಯಿಂದ ನನ್ನ ಮೇಲಿನ ಆರೋಪ ಸಾಬೀತು ಪಡಿಸಲಿ, ನಾನು ಕಿಕ್ ಬ್ಯಾಕ್ ತೆಗೆದುಕೊಂಡಿದ್ದೇನೆ ಎಂದು ಹೇಳಲಾಗುತ್ತಿದೆ. ನನ್ನ ಜೊತೆ ಹುಡುಗಾಟ ಆಡುತ್ತಿದ್ದಾರಾ? ಚೆಲ್ಲಾಟ ಆಡುತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ನನ್ನ ಹೆಸರು ಹಾಳು ಮಾಡಲು ಪೆನ್ ಡ್ರೈವ್, ಸಿಡಿ ತೋರಿಸುತ್ತಿದ್ದೀರಾ, ಸಿಡಿ ಪೆನ್ ಡ್ರೈವ್ ತೋರಿಸಿ ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ್ರೆ ಅದು ಫ್ಯಾಶನ್, ಆದರೆ ಕಾರ್ಪೋರೇಟ್ ಕುಳಗಳ ಸಾಲ ಮಾಡಿದ್ರೆ ಅದು ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಅದು ದೇಶ ಉದ್ದಾರದಾ ಕೆಲಸವಾ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲವನ್ನು ರಾಜ್ಯ ಸರ್ಕಾರವೇ ಮಾಡಲಿ, ಈಗಾಗಲೇ ಕೇಂದ್ರ ಸರ್ಕಾರ ಸಾಲಮನ್ನಾ ಮಾಡುವುದಿಲ್ಲ ಎಂದು ಹೇಳಿದೆ, ಕೇಂದ್ರದ ಬಳಿ ಪದೇ ಪದೇ ಹಲ್ಲು ಕಿರಿದು ನಿಲ್ಲುವುದರ ಬದಲು ರಾಜ್ಯ ಸರ್ಕಾರವೇ ಸಾಲಮನ್ನಾ ಮಾಡಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com