ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್, ಮತ್ತು ವಿಜಯಪುರ ಶಾಸಕ ಎಂಬಿ ಪಾಟೀಲ್, ಅವರವರ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸಬೇಕೆಂದು ಸೂಚಿಸಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಎ. ಮಂಜು,ಡಿಸಿಸಿ ಅಧ್ಯಕ್ಷ ಬಿ ಶಿವರಾಂ, ವೋಣುಗೋಪಾಲ್ ಅವರನ್ನು ಭೇಟಿ ಮಾಡಿದ್ದರು. ಮಂಜು ಮತ್ತು ಶಿವರಾಂ ಕೇವಲ ಒಕ್ಕಲಿಗ ಸಮುದಾಯದ ಮುಖಂಡರನ್ನು ಆಯಕಟ್ಟಿನ ಜಾಗಕ್ಕೆ ತರುತ್ತಿದ್ದಾರೆ ಎಂದು ದೂರಿದ್ದಾರೆ.