ಯಡಿಯೂರಪ್ಪ ತಮ್ಮ ಆರೋಪ ಸಾಬೀತು ಪಡಿಸಿದರೆ ರಾಜಕೀಯ ತೊರೆಯುವೆ: ಜಾರ್ಜ್

ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಹಾಗೂ ಸ್ಟೀಲ್ ಬ್ರಿಡ್ಜ್ ಯೋಜನೆಗಾಗಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ 65 ಕೋಟಿ ರು ಕಿಕ್ ಬ್ಯಾಕ್ ನೀಡಿರುವ ಆರೋಪ ...
ಕೆ.ಜೆ ಜಾರ್ಜ್
ಕೆ.ಜೆ ಜಾರ್ಜ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಹಾಗೂ ಸ್ಟೀಲ್ ಬ್ರಿಡ್ಜ್ ಯೋಜನೆಗಾಗಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ 65 ಕೋಟಿ ರು ಕಿಕ್ ಬ್ಯಾಕ್ ನೀಡಿರುವ ಆರೋಪ ಮಾಡುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಅದನ್ನು ಸಾಬೀತು ಪಡಿಸಿದರೇ ರಾಜಕೀಯ ತೊರೆಯುವುದಾಗಿ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಸವಾಲು ಹಾಕಿದ್ದಾರೆ.

ಯಡಿಯೂರಪ್ಪ ಅರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ನಡುವಿನ ಸಂಭಾಷಣೆಯಿರುವ ಸಿಡಿ ಇಬ್ಬರು ಮುಖಂಡರ ನೈಜ ಬಣ್ಣವನ್ನು ಬಯಲು ಮಾಡಿದೆ ಎಂದು ಆರೋಪಿಸಿದ್ದಾರೆ.

ಬಿಬಿಎಂಪಿಯ 1,600 ಕೋಟಿ ರು ಹಗರಣವನ್ನು ಬಯಲು ಮಾಡುವುದಾಗಿ ಯಡಿಯೂರಪ್ಪ ಬೆದರಿಕೆ ಹಾಕಿದ್ದಾರೆ, ಅವರು ಅದನ್ನು ಬಿಡುಗಡೆ ಮಾಡಲಿ,ಏನು ಬರುತ್ತದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ತಾವು ಮಾಡಿರುವ ಆರೋಪ ಸಾಬೀತು ಮಾಡಿದರೇ ಕೂಡಲೇ ತಾವು ಸಚಿವ ಸ್ಥಾನದಿಂದ ಕೆಳಗಿಳಿಯುವುದಾಗಿ ಹಾಗೂ ಯಾರು ತಪ್ಪು ಮಾಡಿದ್ದಾರೋ ಅಂಥಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com