ಜೆಡಿಎಸ್ ಬಂಡಾಯ ಶಾಸಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದರು. ಸಿಎಂ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ನಾವು ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಚುನಾವಣೆ ಸಮೀಪ ಬಂದಾಗ ಅಧಿಕೃತವಾಗಿ 'ಕೈ' ಹಿಡಿಯುವುದಾಗಿ ಹೇಳಿದ್ದಾರೆ.