ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಾಳೆ ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಜತೆ ಮಾತುಕತೆ ನಡೆಸಲಿದ್ದಾರೆ. ಮಾರ್ಚ್ 15ರ ಬುಧವಾರ ದೆಹಲಿಯಲ್ಲಿ ಎಸ್. ಕೃಷ್ಣ ಬಿಜೆಪಿ ಸೇರಲಿದ್ದಾರೆ.
ನಂಜನಗೂಡು ಉಪಚುನಾವಣೆ ಪ್ರಚಾರ ಮುಗಿಸಿ ಮಂಗಳವಾರ ನವದೆಹಲಿಗೆ ತೆರಳಿ ಕೃಷ್ಣ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರ. ಆದರೆ ಬಿಜೆಪಿ ಸೇರ್ಪಡೆ ಬಗ್ಗೆ ಎಸ್ ಎಂ ಕೃಷ್ಣ ಮಾತ್ರ ಇದುವರೆಗೂ ಎಲ್ಲಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಆರೋಪಿಸಿ ಜನವರಿ 29 ರಂದು ಎಸ್. ಎಂ ಕೃಷ್ಣ ಕಾಂಗ್ರೆಸ್ ತೊರೆದಿದ್ದರು.
ಎಸ್. ಎಂ ಕೃಷ್ಣ ಬಿಜೆಪಿ ಸೇರ್ಪಡೆ ಸಂಬಂಧ ಇಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ, ಇದರಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದಲಿದ್ದಾರೆ.
Advertisement