ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆ ದಿನಾಂಕ ಮುಂದೂಡಿಕೆ: ದೆಹಲಿಯಿಂದ ಬೆಂಗಳೂರಿಗೆ ವಾಪಸ್

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಗೆ ಇಂದು ದಿನಾಂಕ ನಿಗದಿಯಾಗಿತ್ತು, ದೆಹಲಿಯಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿತ್ತು...
ಎಸ್.ಎಂಕೃಷ್ಣ
ಎಸ್.ಎಂಕೃಷ್ಣ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಗೆ ಇಂದು ದಿನಾಂಕ ನಿಗದಿಯಾಗಿತ್ತು, ದೆಹಲಿಯಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ ಅವರ ಸಹೋದರಿ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಿ ಕೃಷ್ಣ ಬೆಂಗಳೂರಿಗೆ ಆಗಮಿಸಿದ್ದಾರೆ.
ಮಂಗಳವಾರ ರಾತ್ರಿ ಎಸ್. ಎಂ ಕೃಷ್ಣ ಸಹೋದರಿ ಸುನೀತಾ ಅವರ ನಿಧನದಿಂದಾಗಿ ಕಾರ್ಯಕ್ರಮವನ್ನು ಮುಂದೂಡಿ ಕೃಷ್ಣ ಬೆಂಗಳೂರಿಗೆ ವಾಪಸಾಗಿದ್ದಾರೆ. ಮುಂದಿನ ವಾರ ಕೃಷ್ಣ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ದಿನಾಂಕ ಮಾತ್ರ ಇನ್ನೂ ನಿಗದಿಯಾಗಿಲ್ಲ.
ಜನವರಿ ತಿಂಗಳಲ್ಲಿ ಕಾಂಗ್ರೆಸ್ ತೊರೆದಿದ್ದ ಕೃಷ್ಣ  ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್  ಶಾ ನೇತೃತ್ವದಲ್ಲಿ  ಬಿಜೆಪಿ ಸೇರ್ಪಡೆಗೆ ದಿನಾಂಕ ನಿಗದಿಯಾಗಿತ್ತು.
ಇನ್ನೂ ಎಸ್.ಎಂ ಕೃಷ್ಣ ಬಿಜೆಪಿ ಸೇರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com