ಬೆಂಗಳೂರು: ರಾಜ್ಯ ಬಿಜೆಪಿ ಭಿನ್ನಮತದ ವಿಷಯವಾಗಿ ಪ್ರತಿಕ್ರಿಯಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ನಾನಿನ್ನೂ ಫ್ರೆಷರ್ , ಪಕ್ಷದ ಆಂತರಿಕ ಜಂಜಾಟದಲ್ಲಿ ನನ್ನನ್ನು ಎಳೆದು ತರಬೇಡಿ ಎಂದಿದ್ದಾರೆ.
ಜನ್ಮ ದಿನದ ಅಂಗವಾಗಿ ನಗರದ ಅಣ್ಣಮ್ಮ ದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್ ಎಂ ಕೃಷ್ಣ , ನನ್ನ ಕೈಯ್ಯಲ್ಲಿ ಬೆಕ್ಕಿಗೆ ಗಂಟೆ ಕಟ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆ ಹರಿಸಿ ಮಾರ್ಗ ದರ್ಶನ ನೀಡುವಂತ ಸಮರ್ಥ ನಾಯಕರು ಪಕ್ಷದಲ್ಲಿದ್ದಾರೆ, ರಾಜ್ಯದಲ್ಲಿ ಪಕ್ಷ ಸಾಕಷ್ಟು ಶಕ್ತಿಯುತವಾಗಿದೆ. ಆತಂಕ ಪಡುವ ಅಗತ್ಯವಿಲ್ಲ, ಎಲ್ಲವೂ ಸರಿ ಹೋಗಲಿದೆ ಎಂದು ಕೃಷ್ಣ ತಿಳಿಸಿದ್ದಾರೆ. ಈ ವೇಳೆ ಅವರ ಪತ್ನಿ ಪ್ರೇಮಾಕೃಷ್ಣ ಜೊತೆಗಿದ್ದರು.