ತಮ್ಮ ಮುಂದಿರುವ ಸವಾಲುಗಳ ಬಗ್ಗೆ ಚೆನ್ನಾಗಿ ಅರಿತಿರುವ ವೇಣು ಗೋಪಾಲ್, ಪಕ್ಷ ನನಗೆ ಒಂದು ಕೆಲಸ ನಿರ್ವಹಿಸಿದೆ, ಅದನ್ನು ಸರಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ನೀಡುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಗದ್ದುಗೇರುವಂತೆ ಮಾಡುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದಾರೆ.