ಮೈಸೂರಿನ ಕೃಷ್ಣಾರಾಜ ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಾಬಲ್ಯ ಇರುವ ಕ್ಷೇತ್ರವಾಗಿದ್ದು, ಕೃಷ್ಣರಾಜ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಚರ್ಚೆ ಪ್ರಾರಂಭವಾಗಿದ್ದು, ಕೆಲವು ದಿನಗಳ ಹಿಂದೆ ಚಿತ್ರನಟಿ ಮಾಳವಿಕಾ ಅವಿನಾಶ್ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಬಹುದೆಂಬ ವರದಿಗಳು ಪ್ರಕಟವಾಗಿತ್ತು. ಈಗ ಈ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮತ್ತೊಂದು ಹೆಸರು ಕೇಳಿಬರುತ್ತಿದ್ದು, ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಈ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.