ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಯೊಂದು ಜಿಲ್ಲೆಗೆ ತಲಾ ಇಬ್ಬರು ವೀಕ್ಷಕರು ನೇಮಿಸಲಾಗಿದ್ದು, ಅವರು ಈ ತಿಂಗಳ 30 ರೊಳಗೆ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯ್ತಿ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ ಎಂದು ಅವರು ಹೇಳಿದರು. ಪಕ್ಷದ ಪ್ರಚಾರ ಸಮಿತಿ ರಚಿಸಲಾಗುತ್ತಿದೆ. ಸಮಿತಿಯಲ್ಲಿ ಅಧ್ಯಕ್ಷ ಮತ್ತು 5 ಜನ ಸದಸ್ಯರಿರುತ್ತಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವನ್ನು ಜನರಿಗೆ ಮುಟ್ಟಿಸುವ ಕೆಲಸ ಈ ಸಮಿತಿ ಮಾಡಲಿದೆ ಎಂದರು.