ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಬಿಜೆಪಿ 2018ರ ವಿಧಾನ ಸಭೆ ಚುನಾವಣೆಯಲ್ಲಿ, ಈಗಾಗಲೇ ಹಲವು ಜನಪ್ರಿಯ ಕಾರ್ಯಕ್ರಮಗಳಿಂದ ಪ್ರಸಿದ್ಧವಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಚುನಾವಣಾ ಪ್ರಚಾರಕ್ಕೆ ಕರೆ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ.