ಅನ್ನಭಾಗ್ಯ ಅಕ್ಕಿಯಿಂದ ರಕ್ತಹೀನತೆ; ನಮ್ಮ ಮನೆಯಲ್ಲಿ ಅಡುಗೆ ಮಾಡುವವರು ದಲಿತರು: ಯಡಿಯೂರಪ್ಪ

ರಾಜ್ಯ ಸರ್ಕಾರ ನೀಡುತ್ತಿರುವ ಕಳಪೆ ಗುಣಮಟ್ಟದ ಅಕ್ಕಿಯಿಂದಾಗಿ ಫಲಾನುಭವಿಗಳು ರಕ್ತಹೀನತೆಗೆ ತುತ್ತಾಗುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ..
ಯಡಿಯೂರಪ್ಪ
ಯಡಿಯೂರಪ್ಪ
Updated on
ಕೊಪ್ಪಳ: ರಾಜ್ಯ ಸರ್ಕಾರ ನೀಡುತ್ತಿರುವ ಕಳಪೆ ಗುಣಮಟ್ಟದ ಅಕ್ಕಿಯಿಂದಾಗಿ ಫಲಾನುಭವಿಗಳು ರಕ್ತಹೀನತೆಗೆ ತುತ್ತಾಗುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ ಜಯಚಂದ್ರ ಅವರಿಗೆ ಈ ಕಟು ಸತ್ಯ ತಿಳಿದಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಕೊಪ್ಪಳದ ಹೀರೆಬಾಗನಹಳ್ಳಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 
ಗ್ರಾಮಗಳಲ್ಲಿರುವ ಮೇಲ್ವರ್ಗದ ಜನ ದಲಿತರನ್ನು ಅಸ್ಪೃಶ್ಯರಂತೆ ಕಾಣುವುದನ್ನು ಯಡಿಯೂರಪ್ಪ ಖಂಡಿಸಿದರು.
ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುವವರು ದಲಿತರೇ ಆಗಿದ್ದಾರೆ ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ ದೇಶದಲ್ಲಿ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನ ಪಡೆಯಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com