ಚುನಾವಣೆ ವರ್ಷದಲ್ಲಿ ದಲಿತರನ್ನು ಬಿಟ್ಟುಕೊಟ್ಟೆವು ಎಂಬ ಸಂದೇಶ ಯಾವುದೇ ಕಾರಣಕ್ಕೂ ರವಾನೆಯಾಗುವುದು ಬೇಡ ಎಂಬ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಸಲು ನಿರ್ಧರಿಸಿದ್ದು, ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸೂಚಿಸಲಾಗಿದೆ. ಹೀಗಾಗಿ ನಾಳೆ ಪರಮೇಶ್ವರ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದ್ದು, ಗೃಹ ಖಾತೆಯ ಹೊಣೆಯನ್ನು ಮತ್ತೆ ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.