ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುತ್ತೇದಾರ್ ಅವರು, ನನ್ನ ಕ್ಷೇತ್ರದಲ್ಲಿ ಸಚಿವರ ಕಾರ್ಯಕ್ರಮ ನಡೆದರೂ ನನಗೆ ಆಹ್ವಾನ ನೀಡಿರಲಿಲ್ಲ. ನಾನು ಒಬ್ಬ ಕಾಂಗ್ರೆಸ್ ಪಕ್ಷದ ಶಾಸಕ. ಅಫ್ಜಲಪುರವನ್ನು ಪ್ರತಿನಿಧಿಸುತ್ತಿದ್ದೇನೆ. ಆದರೆ ಕಾರ್ಯಕ್ರಮದ ಆಯೋಜಕರು ನನ್ನನ್ನು ಕಾರ್ಯಕ್ರಮದಿಂದ ಹೊರಗಿಟ್ಟಿದ್ದರು ಮತ್ತು ನನ್ನ ಕ್ಷೇತ್ರಕ್ಕೆ ಬಂದು ಸಚಿವರು ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ಭಾಷಣ ಮಾಡಿದರೆ ಜನತೆಗೆ ಏನು ಸಂದೇಶ ಹೋಗುತ್ತೇ? ಎಂದು ಪ್ರಶ್ನಿಸಿದ್ದಾರೆ.