ನಂತರ ವಿಕಾಸ ವಾಹಿನಿ ವಾಹನವನ್ನೇರಿ ಚಾಮುಂಡೇಶ್ವರಿ ದೇಗುಲವನ್ನು ಒಂದು ಸುತ್ತು ಹಾಕಿದರು.ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಪರ್ವ ಮೂಲಕ ನಾವು ಯಾವುದೇ ಪಕ್ಷಗಳಿಗೆ ಸಂದೇಶ ನೀಡುವುದಿಲ್ಲ. ರಾಜ್ಯದ ಜನತೆಗೆ ನಾವು ಸಂದೇಶ ನೀಡಲು ಹೊರಟಿದ್ದೇವೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಿ ರೈತರ ಆತ್ಮಹತ್ಯೆ ನಿಲ್ಲಿಸಬೇಕೆಂಬ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.