ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೆಟ್ಟರ್, ಕೇರಳದ ವಿಧಾನಸಭೆಯಲ್ಲಿ ಸೋಲಾರ್ ಹಗರಣದ ವರದಿ ಮಂಡನೆಯಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೆಸರು ಕೇಳಿ ಬಂದಿದೆ. ಜತೆಗೆ, ಅವರ ವಿರುದ್ಧ ಈಗಾಗಲೇ ಅತ್ಯಾಚಾರ ಪ್ರಕರಣದ ಆರೋಪವಿದ್ದು, ಕೂಡಲೇ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.