ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಡಿಸೆಂಬರ್ ತಿಂಗಳಿನಲ್ಲಿ ನಡೆಸಲಿರುವ ಜನ ಆಶೀರ್ವಾದ ಯಾತ್ರೆಯನ್ನು ಸರ್ಕಾರದ ವತಿಯಿಂದ ಮಾಡಬೇಕೆ ಅಥವಾ ಪಕ್ಷದ ವತಿಯಿಂದ ಮಾಡಬೇಕೆ ಎಂಬುದನ್ನು ಒಂದು ವಾರದಲ್ಲಿ ನಿರ್ಧಾರ ಮಾಡಲಾಗುತ್ತದೆ. ಸರ್ಕಾರದ ವತಿಯಿಂದ ನಡೆಸುವುದಾದರೆ, ಯಾತ್ರೆಯಲ್ಲಿ ನಾನು ಭಾಗವಹಿಸುವುದಿಲ್ಲ. ಪಕ್ಷದ ವತಿಯಿಂದ ಆದರೆ, ಭಾಗವಹಿಸುತ್ತೇನೆ. ಯಾವುದೇ ಆದರೂ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವುದು ಯಾತ್ರೆಯ ಉದ್ದೇಶವಾಗಿದ್ದು, ಹೇಗೆ ಮಾಡಬೇಕೆಂಬುದನ್ನು 1 ವಾರದಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.