ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಜನರ ಮನವೊಲಿಸಲು ಸಾಕಷ್ಟು ಕಸರತ್ತುಗಳನ್ನು ಮಾಡುತ್ತಿದೆ. ಇದರಂತೆ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ರಾಜಕೀಯ ಯಾತ್ರೆಗಳನ್ನು ಆರಂಭಿಸಿದ್ದು, ರಾಜಕೀಯ ಪಕ್ಷಗಳ ರಾಜಕೀಯ ಯಾತ್ರೆ ಇದೀಗ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೇಲೆ ಪರಿಣಾಮ ಬೀರತೊಡಗಿದೆ.