ನಾವು ಮಂಡಿಸಿದ್ದ ವಿಧೇಯಕದಲ್ಲಿ ಈ ವರೆಗೂ ವೈದ್ಯರಿಗೆ ತೊಂದರೆಯಾಗುವ ಅಂಶಗಳಿರಲಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಕಚೇರಿ ಸುಳ್ಳು ಮಾಹಿತಿಗಳನ್ನು ಪಸರಿಸುತ್ತಿದೆ. ಆ ಮೂಲಕ ಸರ್ಕಾರ ತನ್ನ ಸಣ್ಣತನವನ್ನು ಪ್ರದರ್ಶನ ಮಾಡಿದೆ. ನಿನ್ನೆ ಕೂಡ ನಾನು ಪ್ರತಿಭಟನಾ ನಿರತ ವೈದ್ಯರನ್ನು ಭೇಟಿ ಮಾಡಿ, ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮುಷ್ಕರ ನಿಲ್ಲಿಸುವಂತೆ ಮನವಿ ಮಾಡಿದ್ದೆ.