ಬಳಿಕ ಅಸಮಾಧಾನ ವ್ಯಕ್ತಪಡಿಸಿದ ಮಂಜುನಾಥ್ ಗೌಡ ಅವರು, ಗಣಿಗಾರಿಕೆಯಲ್ಲಿ ಅಕ್ರಮ ನಡೆದಿರುವುದು ಅತ್ಯಂತ ಗಂಭೀರವಾದ ವಿಚಾರ. ಇಂತಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಸಚಿವರು ಹಾಜರಿರಬೇಕಿತ್ತು ಎಂದು ಹೇಳಿದರು. ಮಂಜುನಾಥ್ ಅವರಿಗೆ ಪಕ್ಷದ ನಾಯಕರಾದ ಸುರೇಶ್ ಗೌಡ ಹಾಗೂ ಬಿಜೆಪಿ ಸದಸ್ಯರಾದ ಸಿ.ಟಿ.ರವಿ, ಜೀವರಾಜ್ ಮತ್ತು ಅರವಿಂದ ಲಿಂಬಾವಳಿಯವರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಸ್ಪೀಕರ್ ಕೋಳಿವಾಡ ಅವರು, ಸಚಿವರು ಅನುಮತಿ ಪಡೆದು ಗೈರು ಹಾಜರಾಗಿದ್ದಾರೆಂದು ಸ್ಪಷ್ಟಪಡಿಸಿದರು.