ಕಾಂಕ್ರೀಟ್ ರಸ್ತೆ ನಿರ್ಮಾಣದ ನಂತರ ಟೋಲ್ ವಸೂಲಿಗೆ ಅವಕಾಶ ಇದ್ದರೂ ಕಾಂಕ್ರೀಟ್ ರಸ್ತೆ ನಿರ್ಮಾಣದ ಮೊದಲೇ ಟೋಲ್ ವಸೂಲಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಮೂಲ ಒಪ್ಪಂದದ ಉಲ್ಲಂಘನೆಯಾಗಿದ್ದು, ಸದನ ಸಮಿತಿಯ ವರದಿ ಇದ್ದರೂ ಸರ್ಕಾರ ಏನೂ ಮಾಡಿಲ್ಲ. ಹೀಗಾಗಿ ನೈಸ್ ಕಂಪನಿಗೆ ನೀಡಿರುವ ಗುತ್ತಿಗೆ ವಾಪಸ್ ಪಡೆದು ರಸ್ತೆಯನ್ನು ವಶಪಡಿಸಿಕೊಳ್ಳಲು ವಿಧೇಯಕ ಮಂಡನೆ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಕುಮಾರಸ್ವಾಮಿಯವರೊಂದಿಗೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಧ್ವನಿಗೂಡಿಸಿದರು.