ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ದಲಿತ ಸಮುದಾಯದ ನಾಯಕರ ಸಭೆಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಾಳೆ ನಡೆಯಲಿದೆ.
ಪ್ರಾದೇಶಿಕ ಪಕ್ಷವೊಂದು ಇಂತಹ ಸಭೆ ನಡೆಸುತ್ತಿರುವುದು ಇದೇ ಮೊದಲಾಗಿದ್ದು ರಾಜ್ಯದ ಅನೇಕ ಕಡೆಗಳಿಂದ ಸುಮಾರು ಸಾವಿರ ದಲಿತ ಮುಖಂಡರು ಭಾಗವಹಿಸಲಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಜನರಿಗೆ ಸಂಬಂಧಪಟ್ಟ ಅನೇಕ ವಿಷಯಗಳು ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಒಂದು ವೇದಿಕೆಯಾಗಲಿದೆ.
ಪಕ್ಷದ ಚುನಾವಣಾ ಪ್ರಣಾಳಿಕೆಯ ರಚನೆಗೆ ಮತ್ತು ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೆ ತರಲು ದಲಿತ ಸಮುದಾಯದ ಮುಖಂಡರ ಸಭೆ ಸಹಾಯವಾಗಲಿದೆ ಎನ್ನುತ್ತಾರೆ ಜೆಡಿಎಸ್ ಪರಿಶಿಶ್ಟ ಜಾತಿ ಘಟಕದ ಅಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ಅನ್ನದಾನಿ.