ಕೇಂದ್ರ ಸರ್ಕಾರ 2 ರು. 50 ಪೈಸೆಗೆ ಯೂನಿಟ್ನಂತೆ ವಿದ್ಯುತ್ ಪೂರೈಸಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಹೆಚ್ಚು ಹಣ ಪಾವತಿಸಿ ಜಿಂದಾಲ್ ಹಾಗೂ ಯುಪಿಸಿಎಲ್ನಿಂದ ವಿದ್ಯುತ್ ಖರೀದಿಸುತ್ತಿದೆ ಎಂಬ ಯಡಿಯೂರಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿಂದ ಡಿ.ಕೆ. ಶಿವಕುಮಾರ್ ಅವರು, ಅಷ್ಟು ಕಡಿಮೆ ದರದಲ್ಲಿ ವಿದ್ಯುತ್ ದೊರೆಯುತ್ತದೆ ಎಂಬುದಾದರೆ ಬೇರೆಡೆ ಖರೀದಿಸುವ ಒಪ್ಪಂದಗಳನ್ನು ರದ್ದು ಮಾಡುತ್ತೇವೆ. ಬೇಕಿದ್ದರೆ ಯಡಿಯೂರಪ್ಪ ಅವರು ಹೇಳಿದ ದಿನಾಂಕದಂದು ನಾವು ಒಪ್ಪಂದ ಮಾಡಿಕೊಳ್ಳಲು ತಯಾರಿದ್ದೇವೆ. ಅಲ್ಲದೆ ಕೇಂದ್ರ ಸಚಿವ ಅನಂತಕುಮಾರ್ ಅವರೂ ನಿಯೋಗದ ನೇತೃತ್ವ ವಹಿಸಲಿ ಎಂದು ಸವಾಲು ಹಾಕಿದ್ದಾರೆ.