ಈ ಬಗ್ಗೆ ಸ್ವತಃ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮಾಹಿತಿ ನೀಡಿದ್ದು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು. ಇದಕ್ಕೂ ಮೊದಲು ಹೈದರಾಬಾದ್ ನ ದುರುಸ್ಸಲಾಂನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಒವೈಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.