ಮೈಸೂರಿನಲ್ಲಿ ದಸರಾ ವೇಳೆ ಮಾತನಾಡಿದ್ದ ಸಿದ್ದರಾಮಯ್ಯ ಮುಂದಿನ ವರ್ಷವು ತಾವೇ ನಂದಿ ದ್ವಜಕ್ಕೆ ಪೂಜೆ ಸಲ್ಲಿಸುವುದಾಗಿ ಹೇಳಿದ್ದರು., ಈ ಮೂಲಕ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದರೇ ಮುಂದಿನ ಸಿಎಂ ತಾವೇ ಎಂಬ ಪರೋಕ್ಷ ಸಂದೇಶ ನೀಡಿದ್ದರು, ಇದಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್, ಮುಂದಿನ ಸಿಎಂ ಯಾರು ಎಂಬುದನ್ನು ಹೈ ಕಮಾಂಡ್ ನಿರ್ಧರಿಸಲಿದೆ, ಆದರೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ತಾವೇ ನಿರ್ಧರಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.