ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಮಾಜಿ ಪೊಲೀಸ್ ಅಧಿಕಾರಿ, ನಾನು ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ, ಆಮ್ ಆದ್ಮಿ ಪಕ್ಷ ಸೇರುವ ಸಾಧ್ಯತೆ ಬಗ್ಗೆ ಚರ್ಚಿಸಿದ್ದೆ. ಆದರೆ ಅಂತಿಮವಾಗಿ ರಾಜ್ಯದಲ್ಲಿ ಹೊಸದೊಂದು ಪಕ್ಷ ಸ್ಥಾಪಿಸುವುದಕ್ಕೆ ಮುಂದಾಗಿದ್ದೇನೆ ಎಂದಿದ್ದಾರೆ.