ರಾಜ್ಯ ಕಾಂಗ್ರೆಸ್ ಉಸ್ತುವಾರಿಯಿಂದ ಕೆ.ಸಿ ವೇಣುಗೋಪಾಲ್ ಅವರನ್ನು ತೆಗೆದು ಹಾಕಬೇಕು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯನ್ನು ವೇಣುಗೋಪಾಲ್ ಅವರಿಗೆ ವಹಿಸಿರುವುದು ಅಚ್ಚರಿ ಮೂಡಿಸಿದೆ, ಏಕೆಂದರೇ ಸ್ವತಃ ವೇಣುಗೋಪಾಲ್ ಅವರೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಿಸಲು ಸಿದ್ದರಾಮಯ್ಯ ಸರ್ಕಾರ ಹಗಲಿರುಳು ಸಿದ್ಧತೆ ನಡೆಸುತ್ತಿದೆ ಎಂದು ದೂರಿದ್ದಾರೆ.