ಸಹಕಾರಿ ಬ್ಯಾಂಕುಗಳು ಮತ್ತು ಸೊಸೈಟಿಗಳಿಗೆ ಅಗತ್ಯ ಹಣವನ್ನು ತ್ವರಿತವಾಗಿ ಒದಗಿಸಲು ರಾಜ್ಯ ಸರ್ಕಾರ ನಿಗದಿತ ಠೇವಣಿ ಮೊತ್ತವನ್ನು ಸಾರ್ವಜನಿಕ ವಲಯ ಸಂಸ್ಥೆಗಳಿಂದ ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಉಳಿದ ಹಣವನ್ನು ಸೂಕ್ತ ಮರು ವಿನಿಯೋಗಗಳ ಮೂಲಕ ಭರಿಸಲು ನಿರ್ಧರಿಸಿದೆ. 2017-18ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಬಗ್ಗೆ ಪ್ರಸ್ತಾಪಿಸಿರದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಯಿತು. ಅದರ ಪ್ರಕಾರ ಕಳೆದ ತಿಂಗಳು 28ರಂದು ಮೈಸೂರು ಮಿನರಲ್ಸ್ ಲಿಮಿಟೆಡ್ ನಿಂದ 1,400 ಕೋಟಿ ರೂಪಾಯಿಗಳನ್ನು ಅಪೆಕ್ಸ್ ಬ್ಯಾಂಕಿನಲ್ಲಿ ಠೇವಣಿಯಿಡುವ ನಿರ್ಧಾರ ಕೈಗೊಳ್ಳಲಾಗಿದ್ದು ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.