ವಜ್ರ ಮಹೋತ್ಸವ ಆತರಣೆ ಮಾಡುವುದರಲ್ಲಿ ತಪ್ಪಿಲ್ಲ, ಆದರೆ ದುಬಾರಿ ಉಡುಗೊರೆ ನೀಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದ್ದಾರೆ, ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ, ಹೀಗಿರುವಾಗ ವಜ್ರ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕೆಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ,ಆರ್ ಸೀತಾರಾಂ ಸಲಹೆ ನೀಡಿದ್ದಾರೆ. ಶಾಸಕಾಂಗ ಸಚಿವಾಲಯ ನಿರ್ಧಾರ ಕೈಗೊಳ್ಳುವ ಮೊದಲು ಸರ್ಕಾರದ ಜೊತೆ ಚರ್ಚಿಸಬೇಕಿತ್ತು ಎಂದು ಹಲವು ಎಂಎಲ್ ಸಿಗಳು ಹೇಳಿದ್ದಾರೆ. ಸಿಎಂ ಸಲಹೆಯ ನಂತರ ಅಂದಾಜು ವೆಚ್ಚ 10 ಕೋಟಿಗೆ ಇಳಿಸುವ ಸಾಧ್ಯತೆಯಿದೆ.