ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ

ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದ ಜನತಾ ಪರಿವಾರದ ಹಿರಿಯ ತಲೆಮಾರಿನ ನಾಯಕ ಹಾಗೂ ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ.
ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ
ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ
ಬೆಂಗಳೂರು: ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದ ಜನತಾ ಪರಿವಾರದ ಹಿರಿಯ ತಲೆಮಾರಿನ ನಾಯಕ ಹಾಗೂ ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಸಿಂಧ್ಯ ಇಂದು ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ  ನಡೆದ ಪೂಜಾ ಕಾರ್ಯಕ್ರಮದ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಸಿಂಧ್ಯ ಜೆಡಿಎಸ್ ಗೆ ಸೇರಿದ್ದಾರೆ. ಇದಕ್ಕೂ ಮುನ್ನ ಪದ್ಮನಾಭನಗರದ ದೇವೇಗೌಡದ ನಿವಾಸದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ದೇವೇಗೌಡರ ಬಳಿ ನಿನ್ನೆ ಮಾತುಕತೆ ನಡೆಸಿದ್ದರು.
ಪಕ್ಷಕ್ಕೆ ಮರಳಿದ ಸಿಂಧ್ಯ, ಇನ್ನು ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷದ ನಾಯಕತ್ವ ನಿರ್ಧರಿಸಲಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com