ಹಿಂದೆ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಅಶೋಕ್ ಅವರು ಬಗರ್ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷರಾಗಿದ್ದರು. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಮತ್ತು ಅವರ ಕುಟುಂಬದವರಿಗೆ 25.32 ಎಕರೆ, ಭೂನ್ಯಾಯ ಮಂಡಳಿ ಮಾಜಿ ಸದಸ್ಯರಿಗೆ 6.38 ಎಕರೆ, ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಅವರ ಕುಟುಂಬಸ್ಥರಿಗೆ 5 ಎಕರೆ, ಆರ್ಥಿಕವಾಗಿ ಪ್ರಬಲರಾದವರು ಮತ್ತು ಅರ್ಜಿ ಸಲ್ಲಿಸಿದ ಗ್ರಾಮದಲ್ಲಿ ವಾಸ ಇಲ್ಲದವರಿಗೂ 162.17 ಎಕರೆ ಜಮೀನು ಮಂಜೂರು ಮಾಡಿದ್ದಾರೆ ಎಂದು ವಿವರಿಸಿದರು.