ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿರುವುದಕ್ಕೆ ಷಡಕ್ಷರಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ನಾನು 1980 ರಿಂದ ಕಾಂಗ್ರೆಸ್ ನಲ್ಲಿದ್ದೇನೆ, ಎರಡು ಬಾರಿ ಶಾಸಕನಾಗಿದ್ದೇನೆ, ಈ ಸಂಬಂಧ ಸಿಎಂ ನನ್ನ ಬಳಿ ಚರ್ಚಿಸಿದ್ದರು. ನಾನು ಸಂಪುಟಕ್ಕೆ ಸೇರಬೇಕಿತ್ತು. ನನಗೆ ಸ್ಥಾನ ಸಿಕ್ಕಿಲ್ಲ, ಆದರೆ ನಾನು ನಿರಾಶೆಗೊಂಡಿಲ್ಲ ಎಂದು ಶಾಸಕ ಷಡಕ್ಷರಿ ಹೇಳಿದ್ದಾರೆ. ಮೊದಲ ಬಾರಿಗೆ ಶಾಸಕಿಯಾಗಿರುವ ಗೀತಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.