ಜನವರಿಯಲ್ಲಿ ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ತಾಯಿಯನ್ನು ಚಿಕಿತ್ಸೆಗೆ ಕರೆದೊಯ್ದ ವೇಳೆ ವೈದ್ಯರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆಕ್ರೋಶಗೊಂಡಿದ್ದ ಅನಂತ್ ಕುಮಾರ್ ಇಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಘಟನೆಯಲ್ಲಿ ವೈದ್ಯರ ತುಟಿ ಒಡೆದು ರಕ್ತ ಹೊರ ಬಂದಿತ್ತು. ಆದರೆ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.